2 ತಿಮೊಥೆಯನಿಗೆ
ಗ್ರಂಥಕರ್ತೃತ್ವ
ರೋಮಾಪುರದ ಸೆರೆಮನೆಯಿಂದ ಪೌಲನು ಬಿಡುಗಡೆಯಾದ ನಂತರ ಮತ್ತು ನಾಲ್ಕನೇ ಮಿಷನರಿ ಪ್ರಯಾಣದಲ್ಲಿ ಅವನು 1 ತಿಮೊಥೆಯನ ಪತ್ರಿಕೆಯನ್ನು ಬರೆದ ನಂತರ, ಮತ್ತೆ ಪೌಲನನ್ನು ನೀರೋ ಚಕ್ರವರ್ತಿಯ ಆಳ್ವಿಕೆಯಡಿಯಲ್ಲಿ ಸೆರೆಮನೆಗೆ ಹಾಕಲಾಯಿತು. ಈ ಸಮಯದಲ್ಲಿ ಅವನು 2 ತಿಮೊಥೆಯನ ಪತ್ರಿಕೆಯನ್ನು ಬರೆದನು. ಅವನು ಮೊದಲ ಬಾರಿ ಸೆರೆಮನೆಯಲ್ಲಿದ್ದಾಗ, ಅವನು ‘ಬಾಡಿಗೆ ಮನೆ’ ಯಲ್ಲಿ (ಅ.ಪೊ. 28:30) ವಾಸವಾಗಿದ್ದ ಸ್ಥಿತಿಗೂ ಇದಕ್ಕೂ ವ್ಯತ್ಯಾಸವಿದೆ, ಈಗ ಅವನು ಸಾಮಾನ್ಯ ಅಪರಾಧಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿ (1:16; 2:9), ಶೀತಲ ಕಾರಾಗೃಹದಲ್ಲಿ ಬಳಲುತ್ತಿದ್ದಾನೆ (4:13). ತನ್ನ ಕೆಲಸವು ಮುಗಿದಿದೆ ಮತ್ತು ತನ್ನ ಜೀವನದ ಅಂತ್ಯವು ಸಮೀಪವಾಗಿದೆ ಎಂದು ಪೌಲನಿಗೆ ತಿಳಿದಿತ್ತು (4: 6-8).
ಬರೆದ ದಿನಾಂಕ ಮತ್ತು ಸ್ಥಳ
ಸರಿಸುಮಾರು ಕ್ರಿ.ಶ. 66-67 ರ ನಡುವೆ ಬರೆಯಲ್ಪಟ್ಟಿದೆ.
ಪೌಲನು ರೋಮಾಪುರದಲ್ಲಿ ತನ್ನ ಎರಡನೆಯ ಸೆರೆವಾಸದಲ್ಲಿದ್ದುಕೊಂಡು, ತನ್ನ ರಕ್ತಸಾಕ್ಷಿಯ ಮರಣಕ್ಕಾಗಿ ಕಾಯುತ್ತಿರುವಾಗ ಅವನು ಈ ಪತ್ರಿಕೆಯನ್ನು ಬರೆದನು.
ಸ್ವೀಕೃತದಾರರು
ತಿಮೊಥೆಯು ಎರಡನೆಯ ತಿಮೊಥೆಯನ ಪತ್ರಿಕೆಯ ಪ್ರಾಥಮಿಕ ಓದುಗನಾಗಿದ್ದಾನೆ, ಆದರೆ ಖಂಡಿತವಾಗಿ ಅವನು ಸಭೆಯೊಂದಿಗೆ ಇದರ ವಿಷಯವನ್ನು ಹಂಚಿಕೊಂಡನು.
ಉದ್ದೇಶ
ತಿಮೊಥೆಯನಿಗೆ ಅಂತಿಮ ಪ್ರೋತ್ಸಾಹವನ್ನು ನೀಡಲು ಮತ್ತು ಪೌಲನು ಅವನಿಗೆ ವಹಿಸಿಕೊಟ್ಟ ಕಾರ್ಯಭಾರವನ್ನು ಧೈರ್ಯದಿಂದ (1:3-14), ಶ್ರದ್ಧೆಯಿಂದ (2:1-26), ಮತ್ತು ನಿಷ್ಠೆಯಿಂದ (3:14-17; 4:1-8) ಮುಂದುವರಿಸುವಂತೆ ಪ್ರೇರೇಪಿಸಲು ಬರೆದನು.
ಮುಖ್ಯಾಂಶ
ನಂಬಿಗಸ್ತವಾದ ಸೇವೆಗಾಗಿ ನಿಯೋಗ
ಪರಿವಿಡಿ
1. ಸೇವೆಗೆ ಪ್ರೇರಣೆ — 1:1-18
2. ಸೇವೆಯಲ್ಲಿರಬೇಕಾದ ಮಾದರಿ — 2:1-26
3. ಸುಳ್ಳು ಬೋಧನೆಯ ವಿರುದ್ಧ ಎಚ್ಚರಿಕೆ — 3:1-17
4. ಪ್ರೋತ್ಸಾಹದ ಮಾತುಗಳು ಮತ್ತು ಆಶೀರ್ವಾದಗಳು — 4:1-22