ಕುರಿಮರಿಯು ಮತ್ತು ಆತನ ಜನರು
14
ಆನಂತರ ನಾನು ನೋಡಲಾಗಿ aಯಜ್ಞದ ಕುರಿಮರಿಯಾದಾತನು bಚೀಯೋನ್ ಪರ್ವತದ ಮೇಲೆ ನಿಂತಿರುವುದನ್ನು ಕಂಡೆನು. ಆತನ ಜೊತೆಯಲ್ಲಿ cಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. dಅವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.
2 ಇದಲ್ಲದೆ ಪರಲೋಕದಿಂದ eಜಲಪ್ರವಾಹದ ಘೋಷದಂತೆಯೂ fದೊಡ್ಡ ಗುಡುಗಿನ ಶಬ್ದದಂತೆಯೂ ಇದ್ದ ಮಹಾಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು gವೀಣೆಗಳನ್ನುh ನುಡಿಸಿಕೊಂಡು ಹಾಡುತ್ತಿರುವ ವೀಣೆಗಾರರ ಶಬ್ದದಂತಿತ್ತು.
3 ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ iಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು jಬೇರೆ ಯಾರೂ ಆ ಹಾಡನ್ನು ಕಲಿಯಲಾರರು.
4 ಇವರು kಕನ್ಯೆಯರಂತೆ lಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ mಪ್ರಥಮಫಲದಂತಾದರು.
5 ಇವರ ಬಾಯಲ್ಲಿ ಸುಳ್ಳು ಇರಲೇ ಇಲ್ಲ. ಇವರು nನಿರ್ದೋಷಿಗಳಾಗಿದ್ದಾರೆ.
ಮೂವರು ದೇವದೂತರ ಸಂದೇಶಗಳು
6 ಮತ್ತೊಬ್ಬ ದೇವದೂತನು oಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು.
7 ಆ ದೂತನು, “ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, pನೀರಿನ ಬುಗ್ಗೆಗಳನ್ನೂ qಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಮಹಾಧ್ವನಿಯಿಂದ ಹೇಳಿದನು.
8 ಅವನ ಹಿಂದೆ ಎರಡನೆಯ ದೇವದೂತನು ಬಂದು, r“ಬಿದ್ದಳು! ಬಿದ್ದಳು! sಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ tತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು uಕುಡಿಸಿದಳು” ಎಂದು ಹೇಳಿದನು.
9 ಅವನ ಹಿಂದೆ ಮೂರನೆಯ ದೇವದೂತನು ಬಂದು, “ಯಾವನಾದರೂ ಯಾವುದೇ vಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ wತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿಕೊಂಡಿದ್ದರೆ,
10 ಅವನೂ ಸಹ xದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ yದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ zಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.
11 aಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ, bಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರಾಗಲಿ cಹಗಲೂ ರಾತ್ರಿ ವಿಶ್ರಾಂತಿಯಿಲ್ಲದೆ ಇರುವರು” ಎಂದು ಮಹಾಶಬ್ದದಿಂದ ಹೇಳಿದನು.
12 dಇದರಲ್ಲಿ ದೇವರ ಆಜ್ಞೆಗಳನ್ನೂ, ಯೇಸುವಿನ ಬಗ್ಗೆ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ eದೇವಜನರ ತಾಳ್ಮೆಯು ಇಲ್ಲಿ ತೋರಿಬರಬೇಕಾಗಿದೆ.
13 ಪರಲೋಕದಿಂದ ಒಂದು ಧ್ವನಿಯು ನನಗೆ ಕೇಳಿಸಿತು. ಅದು, “ಇಂದಿನಿಂದ fಕರ್ತನ ಭಕ್ತರಾಗಿ ಸಾಯುವವರು gಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು, “ಹೌದು, ಅವರು ಧನ್ಯರೇ. hಅವರು ತಮ್ಮ ಶ್ರಮೆಗಳಿಂದ ಮುಕ್ತರಾಗಿ ವಿಶ್ರಮಿಸಿಕೊಳ್ಳುತ್ತಾರೆ ಮತ್ತು ಅವರ ಸುಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ” ಎಂದು ಹೇಳುತ್ತಾನೆ.
ಭೂಲೋಕದ ಸುಗ್ಗಿಕಾಲವನ್ನು ಕುರಿತದ್ದು
14 ಆಗ ನಾನು ನೋಡಲಾಗಿ ಇಗೋ, ಒಂದು ಬಿಳಿ ಮೇಘವು ಕಾಣಿಸಿತು. ಆ ಮೇಘದ ಮೇಲೆ iಮನುಷ್ಯಕುಮಾರನಂತಿದ್ದ ಒಬ್ಬಾತನು ಕುಳಿತಿರುವುದನ್ನು ಕಂಡೆನು. jಆತನ ತಲೆಯ ಮೇಲೆ ಚಿನ್ನದ ಕಿರೀಟವೂ, ಆತನ ಕೈಯಲ್ಲಿ ಹರಿತವಾದ ಕುಡುಗೋಲೂ ಇದ್ದವು.
15 ಆಗ ಮತ್ತೊಬ್ಬ ದೂತನು kದೇವಾಲಯದೊಳಗಿನಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ, l“ಭೂಮಿಯ ಪೈರು ಮಾಗಿದೆ, ಕೊಯ್ಯುವ ಕಾಲ ಬಂದಿದೆ. mನಿನ್ನ ಕುಡುಗೋಲನ್ನು ಹಾಕಿ ಪೈರನ್ನು ಕೊಯ್ಯಿ” ಎಂದು ಮಹಾಧ್ವನಿಯಿಂದ ಕೂಗಿದನು.
16 ಮೇಘದ ಮೇಲೆ ಕುಳಿತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು. ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು.
17 ಮತ್ತೊಬ್ಬ ದೇವದೂತನು ಪರಲೋಕದಲ್ಲಿರುವ ದೇವಾಲಯದೊಳಗಿನಿಂದ ಬಂದನು. ಅವನ ಬಳಿಯೂ ಹರಿತವಾದ ಕುಡುಗೋಲು ಇತ್ತು.
18 ತರುವಾಯ nಬೆಂಕಿಯ ಮೇಲೆ ಅಧಿಕಾರ ಹೊಂದಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷಿಗೊಂಚಲುಗಳನ್ನು ಕೊಯ್ಯಿ. oಅದರ ಹಣ್ಣುಗಳು ಪೂರಾ ಮಾಗಿವೆ” ಎಂದು ಮಹಾಧ್ವನಿಯಿಂದ ಕೂಗಿದನು.
19 ಆಗ ಆ ದೂತನು ತನ್ನ ಕುಡುಗೋಲಿನಿಂದ ಭೂಮಿಯ ಮೇಲಿನ ದ್ರಾಕ್ಷಿಬಳ್ಳಿಯಲ್ಲಿದ್ದ ದ್ರಾಕ್ಷಿಹಣ್ಣನ್ನು ಕೊಯ್ದು ಕೂಡಿಸಿ, pದೇವರ ರೌದ್ರವೆಂಬ ದ್ರಾಕ್ಷಿಯ ದೊಡ್ಡ ಆಲೆಗೆ ಹಾಕಿದನು.
20 ಆಗ ಆಲೆಯನ್ನು qಪಟ್ಟಣದ ಹೊರಗೆ ತೆಗೆದುಕೊಂಡು ಹೋಗಿ ತುಳಿದರು. ಆ ಆಲೆಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಮೇಲಕ್ಕೆ ಬಂದು rಮುನ್ನೂರು ಕಿಲೋಮೀಟರಿನಷ್ಟು ದೂರ ಹರಿಯಿತು.